ಶಿವಮೊಗ್ಗ : ಕೋಮುದ್ವೇಷಕ್ಕೆ ಬಲಿಯಾದ ಬಜರಂಗದಳ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ನೆರವಿನ ಮಹಾಪೂರ ಹರಿದು ಬಂದಿದ್ದು, ಈವರೆಗೆ 2 ಕೋಟಿ ರೂಪಾಯಿಗಳಿಗೂ ಅಧಿಕ ನೆರವು ನೀಡಲಾಗಿದೆ ಎಂದು ತಿಳಿದುಬಂದಿದೆ.
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ 10 ಲಕ್ಷ ರೂಪಾಯಿ ನೀಡಿರುವುದು ಸೇರಿದಂತೆ ಹರ್ಷ ಅವರ ಮನೆಗೆ ಭೇಟಿ ನೀಡಿದ್ದ ರಾಜಕಾರಣಿಗಳು, ಮಠಾಧೀಶರು ಹಣದ ನೆರವು ನೀಡಿದ್ದಾರೆ.
ಅಲ್ಲದೆ ಹರ್ಷ ತಾಯಿ ಪದ್ಮಾ ಅವರ ಖಾತೆಯ ವಿವರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಹಲವರು ನೆರವಿಗೆ ಮನವಿ ಮಾಡಿದ್ದು ಈ ಮೂಲಕವೂ ಸಾಕಷ್ಟು ಹಣ ಜಮೆಯಾಗಿದೆ ಎಂದು ಹೇಳಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

