Breaking News

ಇಂದು ಮೇಕೆದಾಟು ಪಾದಯಾತ್ರೆ ಸಮಾರೋಪ ಸಮಾರಂಭ

ಬೆಂಗಳೂರು: ಮೇಕೆದಾಟು ಯೋಜನೆಗೆ ಕಾಂಗ್ರೆಸ್ ಕೈಗೊಂಡಿರುವ ಪಾದಯಾತ್ರೆ ಸಮಾರೋಪ ಸಮಾರಂಭ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ.

ಬೆಳಗ್ಗೆ 9 ಗಂಟೆಗೆ ಅರಮನೆ ಮೈದಾನದಿಂದ ಪಾದಯಾತ್ರೆ ಆರಂಭವಾಗಲಿದ್ದು, ಕಾವೇರಿ ಚಿತ್ರಮಂದಿರ, ಸ್ಯಾಂಕಿ ಟ್ಯಾಂಕ್, ಮಲ್ಲೇಶ್ವರಂ 18ನೇ ಕ್ರಾಸ್, ಮಾರ್ಗೋಸಾ ರಸ್ತೆ, ಕೆಸಿ ಜನರಲ್ ಆಸ್ಪತ್ರೆ, ಶೇಷಾದ್ರಿಪುರಂ ಲಿಂಕ್ ರಸ್ತೆ, ರಾಜೀವ್ ಗಾಂಧಿ ಪ್ರತಿಮೆ, ಕಾಟನ್ ಪೇಟೆ ಮುಖ್ಯರಸ್ತೆ, ಬ್ರಿಯಾಂಡ್ ಸರ್ಕಲ್, ಈದ್ಗಾ ಮೈದಾನ ಮಾರ್ಗವಾಗಿ ನ್ಯಾಷನಲ್ ಕಾಲೇಜು ಮೈದಾನಕ್ಕೆ ತಲುಪಲಿದೆ.

ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆಯುವ ಸಮಾರೋಪ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *