ತಿರುವನಂತಪುರಂ : ಉಕ್ರೇನ್ ಮತ್ತು ರಷ್ಯಾ ನಡುವಿನ ಸಮರವು ಪ್ರತಿ ರಾಷ್ಟ್ರವನ್ನು ಬೆಚ್ಚಿ ಬೀಳಿಸಿದೆ. ಓದು, ಉದ್ಯೋಗ ಎಂದು ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರಲ್ಲಿ 3,500 ಕೇರಳಿಗರು ಸಿಲುಕಿದ್ದಾರೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ತಿಳಿಸಿದ್ದಾರೆ.
ಉಕ್ರೇನ್ ನಲ್ಲಿ ಸಿಲುಕಿರುವ ಕೇರಳಿಗರ ತಕ್ಷಣದ ಸ್ಥಳಾಂತರಕ್ಕಾಗಿ ವಿದೇಶಾಂಗ ಸಚಿವಾಲಯವು ಉಕ್ರೇನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ವಿವರಗಳನ್ನು ಹಸ್ತಾಂತರಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಸುಮಾರು 3,500 ಜನರು ಈಗಾಗಲೇ ನೋರ್ಕಾ ರೂಟ್ಸ್ ಕಂಟ್ರೋಲ್ ರೂಮ್ನಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಕೇರಳ ಮುಖ್ಯಮಂತ್ರಿ ಫೇಸ್ಬುಕ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

