Breaking News

35ಕ್ಕೂ ಹೆಚ್ಚು ಜನರ ಮೇಲೆ ಹುಚ್ಚು ನಾಯಿಗಳ ದಾಳಿ


ಮೈಸೂರು: ಹುಚ್ಚು ನಾಯಿಗಳ ದಾಳಿಗೆ 35ಕ್ಕೂ ಹೆಚ್ಚು ಜನರಿಗೆ ಗಾಯವಾದ ಘಟನೆ ಜಿಲ್ಲೆಯ ಹುಣಸೂರು ನಗರದ ಕಲ್ಪತರು ವೃತ್ತದ ಬಳಿ ನಡೆದಿದೆ.

ಗಾಯಗೊಂಡವರಿಗೆ ಸದ್ಯ ಹುಣಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಶಾಲಾ ಮಕ್ಕಳು ಸೇರಿದಂತೆ 10ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಾಳುಗಳಿಗೆ ಹುಣಸೂರು ಆಸ್ಪತ್ರೆಯಲ್ಲಿ ಹೊರರೋಗಿಗಳಾಗಿ ಚಿಕಿತ್ಸೆ ನೀಡಲಾಗುತ್ತಿದೆ.

ಪಾದಾಚಾರಿಗಳನ್ನು ಕಚ್ಚಿದ ಹುಚ್ಚು ನಾಯಿಗಳ ಗುಂಪು, 35ಕ್ಕೂ ಅಧಿಕ ಜನರನ್ನು ಕಚ್ಚಿ ಪರಾರಿಯಾಗಿವೆ. ನಾಯಿಗಳ ಉಪಟಳದಿಂದ ಸಾರ್ವಜನಿಕರು ಬಹಳ ತೊಂದರೆಗೆ ಒಳಗಾಗಿದ್ದಾರೆ. ಘಟನೆ ಬೆನ್ನಲ್ಲೇ ನಾಯಿಗಳ ಹಾವಳಿ ತಡೆಯುವಂತೆ ಸಾರ್ವಜನಿಕರ ಒತ್ತಾಯ ಕೇಳಿಬಂದಿದೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *