ಕೀವ್ : ಉಕ್ರೇನ್- ರಷ್ಯಾ ಯುದ್ಧ ಮುಂದುವರೆದಿದ್ದು, ಉಕ್ರೇನ್ ರಾಜಧಾನಿ ಕೀವ್ ನಲ್ಲಿ ಇನ್ನೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡು ತಗುಲಿದ್ದು, ಸದ್ಯ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕೇಂದ್ರ ಸಚಿವ ವಿ.ಕೆ.ಸಿಂಗ್ ಮಾಹಿತಿ ನೀಡಿದ್ದಾರೆ.
ರಷ್ಯಾದ ಗುಂಡಿನ ದಾಳಿಯಲ್ಇ ಕೀವ್ ನ ವಿದ್ಯಾರ್ಥಿಯೊಬ್ಬನಿಗೆ ಗುಂಡು ತಗುಲಿದೆ.
ತಕ್ಷಣವೇ ವಿದ್ಯಾರ್ಥಿಯನ್ನು ಕೀವ್ ನ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಜನರಲ್ ವಿ.ಕೆ.ಸಿಂಗ್ ಅವರು ಹೇಳಿದರು. ಪ್ರತಿಯೊಬ್ಬರೂ ಕೀವ್ ನಿಂದ ಹೊರಹೋಗಬೇಕೆಂದು ಭಾರತೀಯ ರಾಯಭಾರ ಕಚೇರಿ ಈ ಹಿಂದೆ ಆದ್ಯತೆಯ ಮೇಲೆ ಅನುಮೋದನೆ ನೀಡಿತ್ತು ಎಂದು ಅವರು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

