ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 233 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 648 ಮಂದಿ ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣ ಸಂಖ್ಯೆ 3,469ಕ್ಕೆ ಇಳಿಕೆಯಾಗಿದೆ.
ರಾಜ್ಯದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ 6 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ. ಬೆಂಗಳೂರು ನಗರ 2, ಧಾರವಾಡ, ಹಾಸನ, ತುಮಕೂರು, ವಿಜಯಪುರ ಜಿಲ್ಲೆಯಲ್ಲಿ ತಲಾ ಒಂದು ಮರಣ ಪ್ರಕರಣ ದಾಖಲಾಗಿದೆ. ಆ ಮೂಲಕ ಮರಣ ದರ ಶೇ. 2.57 ಹಾಗೂ ಪಾಸಿಟಿವ್ ದರ ಶೇ. 0.48ಕ್ಕೆ ಇಳಿಕೆಯಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

