Breaking News

ನವೀನ್ ಮೃತದೇಹವನ್ನು ಪಡೆಯುವ ಪ್ರಯತ್ನ ಜಾರಿಯಲ್ಲಿದೆ : ಬೊಮ್ಮಾಯಿ


ಬೆಂಗಳೂರು : ನವೀನ್ ಮೃತದೇಹವನ್ನು ಪಡೆಯುವ ಪ್ರಯತ್ನ ಜಾರಿಯಲ್ಲಿದೆ. ನಿಖರ ಮಾಹಿತಿ ಪಡೆಯಲಾಗುತ್ತಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು‌ ಅವರು,ಉಕ್ರೇನ್ ನಿಂದ ಹಲವಾರು ಕನ್ನಡಿಗರನ್ನು ಕರೆತರಲಾಗಿದೆ.ಖರಕಾಯ್, ಕೀವ್ ನಲ್ಲಿ ಹೊರಬರಲಾರದ ಪರಿಸ್ಥಿತಿಯೂ ಇದೆ. ಸಿಲುಕಿಕೊಂಡವರನ್ನು ಪತ್ತೆ ಹಚ್ಚಲು ರಾಯಭಾರಿ ಕಚೇರಿಯವರೂ ಕಾರ್ಯನಿರತರಾಗಿದ್ದಾರೆ. ದಾಳಿ ಕಡಿಮೆಯಾದ ಕೂಡಲೇ ಸಂಪರ್ಕ ಸಾಧಿಸಲಾಗುವುದು ಎಂದು ಹೇಳಿದ್ದಾರೆ. ನಿನ್ನೆಯೂ ಕೇಂದ್ರ ವಿದೇಶಾಂಗ ಸಚಿವರೊಂದಿಗೆ ಮಾತನಾಡಿದ್ದು, ಉಕ್ರೇನ್ ರಾಯಭಾರ ಕಚೇರಿಯೊಂದಿಗೂ ಮಾತನಾಡಲಾಗಿದೆ ಎಂದರು.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *