ಚಳಗೇರಿ (ಕುಮಾರಪಟ್ಟಣ): ‘ರಾಜ್ಯ ಸರ್ಕಾರದಿಂದ ಮೃತ ನವೀನ ಗ್ಯಾನಗೌಡರ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡುವ ತೀರ್ಮಾನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೈಗೊಂಡಿದ್ದಾರೆ. ಬೊಮ್ಮಾಯಿ ಅವರೇ ಶನಿವಾರ ಇಲ್ಲಿಗೆ ಬಂದು ಪರಿಹಾರದ ಚೆಕ್ ವಿತರಿಸುವ ನಿರೀಕ್ಷೆಯಿದೆ’ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿ ಗ್ರಾಮದಲ್ಲಿರುವ ಮೃತ ನವೀನ ಗ್ಯಾನಗೌಡರ ನಿವಾಸಕ್ಕೆ ಶುಕ್ರವಾರ ರಾತ್ರಿ ಭೇಟಿ ನೀಡಿ, ಪಾಲಕರಿಗೆ ಸಮಾಧಾನ ಪಡಿಸಿದ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ವಯಸ್ಸಿಗೆ ಬಂದ ಮಗನನ್ನು ಕಳೆದುಕೊಂಡ ತಂದೆ-ತಾಯಿಯ ನೋವು ಮತ್ತು ಕಣ್ಣೀರಿಗೆ ಸಾಂತ್ವನ ಹೇಳಲು ನನ್ನ ಬಳಿ ಪದಗಳೇ ಇಲ್ಲದಂತಾಗಿದೆ. ಇಂಥ ಪರಿಸ್ಥಿತಿ ಯಾವ ಪೋಷಕರಿಗೂ ಬರಬಾರದು ಎಂದು ಅವರು ಮರುಕ ವ್ಯಕ್ತಪಡಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

