ಶಿವಮೊಗ್ಗ: ನಗರದಲ್ಲಿ ನಡೆದಂತ ಹರ್ಷ ಹತ್ಯೆ ಪ್ರಕರಣ ಮಾಸುವ ಮುನ್ನವೇ, ಮತ್ತೊಬ್ಬ ವ್ಯಕ್ತಿಯ ಮೇಲೆ ಹಲ್ಲೆ ಪ್ರಕರಣ ವರದಿಯಾಗಿತ್ತು. ಈ ಸಂಬಂಧ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
ಈ ಕುರಿತಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿದ್ದು, ದಿನಾಂಕಃ-3-3-2022 ರಂದು ಸಂಜೆ 06-30 ಗಂಟೆಗೆ ತುಂಗಾನಗರ ಠಾಣಾ ವ್ಯಾಪ್ತಿಯ ಪದ್ಮಾ ಟಾಕೀಸ್ ಎದುರು ಗೋಪಾಳ ಶಿವಮೊಗ್ಗ ಟೌನ್ ನ ವಾಸಿಯೊಬ್ಬರು ತಮ್ಮ ನಾಯಿಯನ್ನು ಹಿಡಿದುಕೊಂಡು ವಾಕಿಂಗ್ ಗೆ ಹೋಗಿ ವಾಪಾಸ್ ಮನೆಗೆ ಹಿಂದಿರುಗುವಾಗ ವಿದ್ಯಾನಿಕೇತನ ಶಾಲೆಯ ಹತ್ತಿರ ಅವರಿಗೆ ಹಲ್ಲೆಯಾದ ಬಗ್ಗೆ ನೀಡಿದ ದೂರಿನ ಮೇರೆಗೆ ಗುನ್ನೆ ಸಂಖ್ಯೆ 0100/2022 ಕಲಂ 504, 324, 307 ಸಹಿತ 34 ಐಪಿಸಿ ಮತ್ತು ಕಲಂ 3 (2) (v) the sc & st Amendment Act 2015 ರೀತ್ಯಾ ಪ್ರಕರಣ ದಾಖಲಿಸಿ, ಸದರಿ ಪ್ರಕರಣದ ಆರೋಪಿಗಳಾದ 1] ಸಲ್ಮಾನ್, 20 ವರ್ಷ, ಬಡಾವಣೆ ಶಿವಮೊಗ್ಗ ಟೌನ್ ಮತ್ತು 2) ಸೈಯದ್ ಸುಬಾನ್, 18 ವರ್ಷ, ಅಣ್ಣನಗರ, ಶಿವಮೊಗ್ಗ ಟೌನ್ ರವರುಗಳನ್ನು ವಶಕ್ಕೆ ಪಡೆದು, ಹೆಚ್ಚಿನ ತನಿಖೆ ಕೈಗೊಳ್ಳಲಾಗಿರುತ್ತದೆ ಎಂದು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

