ಬೆಂಗಳೂರು ಗ್ರಾಮಾಂತರ: ಬೆಳ್ಳಂ ಬೆಳಿಗ್ಗೆ ಬೆಂಕಿ ಅವಘಡ ಸಂಭವಿಸಿದ್ದು, ಕಟ್ಟಡ ಹೊತ್ತಿ ಉರಿದಿದೆ.ದೇವನಹಳ್ಳಿ ತಾಲೂಕಿನ ಬೂದಿಗೆರೆ ಗ್ರಾಮದ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ.
ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಅವಘಡ ಶಂಕೆ ವ್ಯಕ್ತವಾಗಿದ್ದು, ಮಂಜುಶ್ರೀ ಗ್ಯಾಸ್ ಬುಕ್ಕಿಂಗ್ ಮತ್ತು ಕೇಬಲ್ ಬುಕ್ಕಿಂಗ್ ಕಛೇರಿ ಹೊತ್ತಿ ಉರಿದಿವೆ. ಬೆಂಕಿಯ ರುದ್ರ ನರ್ತನಕ್ಕೆ ಸಂಪೂರ್ಣ ಕಟ್ಟಡ ಹೊತ್ತಿ ಊರಿದಿದ್ದು, ಕಛೇರಿಯಲ್ಲಿದ್ದ ಪೀಠೋಪಕರಣಗಳೆಲ್ಲ ಸುಟ್ಟು ಭಸ್ಮವಾಗಿವೆ. ಬೆಂಕಿ ಅವಘಡದಿಂದ ಕೆಲ ಕಾಲ ಸುತ್ತಮುತ್ತಲಿನ ಜನರಲ್ಲಿ ಆತಂಕ ಆವರಿಸಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸುವಲ್ಲಿ ಯಶಸ್ವಿಗಿದ್ದಾರೆ. ಚನ್ನರಾಯಪಟ್ಟಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

