Breaking News

ಯುದ್ದ ಪೀಡಿತ ಉಕ್ರೇನ್‌ ನಿಂದ ತಾಯ್ನಾಡಿಗೆ ಆಗಮಿಸಿದ 210 ವಿದ್ಯಾರ್ಥಿಗಳು


ಉಕ್ರೇನ್‌ ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಇಂದು ವಾಯುಪಡೆಯ ವಿಶೇಷ ವಿಮಾನದ ಮೂಲಕ 210 ಭಾರತೀಯರನ್ನು ದೆಹಲಿಗೆ ಕರೆತರಲಾಯಿತು.
ದೆಹಲಿಯ ಹಿಂದನ್‌ ಏರ್‌ ಬೇಸ್‌ ಗೆ ವಿಮಾನ ಆಗಮಿಸಿದ್ದು, ವಿದ್ಯಾರ್ಥಿಗಳು ಸೇರಿದಂತೆ 210 ಜನರು ತಾಯ್ನಾಡಿಗೆ ಸುರಕ್ಷಿತವಾಗಿ ವಾಪಾಸ್‌ ಆಗಿದ್ದಾರೆ.

ಉಕ್ರೇನ್‌ ನ ನೆರೆ ರಾಷ್ಟ್ರ ರೊಮೇನಿಯಾದಿಂದ ಹೊರಟ ವಿಮಾನ ಇಂದು ಮುಂಜಾನೆ 5 ಗಂಟೆಗೆ ದೆಹಲಿ ತಲುಪಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಮಾಹಿತಿ ನೀಡಿದೆ. ಶನಿವಾರ ಒಂದೇ ದಿನ ಸುಮಾರು 3 ಸಾವಿರ ಭಾರತೀಯರನ್ನು 15 ವಿಮಾನಗಳ ಮೂಲಕ ಕರೆತರಲಾಗಿದೆ. ಇದರಲ್ಲಿ 3 ವಾಯುಪಡೆ ವಿಮಾನಗಳನ್ನು ನಿಯೋಜಿಸಲಾಗಿತ್ತು.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *