ಹಾವೇರಿ :ಉಕ್ರೇನ್ ಯುದ್ಧದಲ್ಲಿ ಬಾಂಬಿಂಗ್ ಪರಿಣಾಮ ಸಾವನ್ನಪ್ಪಿರುವ ನವೀನ್ ಮೃತದೇಹವನ್ನು ತಾಯ್ನಾಡಿಗೆ ತರಲು ಪ್ರಯತ್ನ ನಡೆದಿದೆ ಹಾಗೂ ಇನ್ನೂ ಉಕ್ರೇನ್ನಲ್ಲಿ ಉಳಿದಿರುವ ವಿದ್ಯಾರ್ಥಿಗಳನ್ನು ಕರೆತರುವ ಕಾರ್ಯ ಪ್ರಗತಿಯಲ್ಲಿದೆ.
ಈ ನಿಟ್ಟಿನಲ್ಲಿ ಕೇಂದ್ರದೊಂದಿಗೆ ಈಗಾಗಲೇ ಸಂಪರ್ಕದಲ್ಲಿದ್ದೇವೆ ಎಂದು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಇತ್ತೀಚೆಗೆ ಉಕ್ರೇನ್ನಲ್ಲಿ ಮೃತಪಟ್ಟ ಚಳಗೇರಿಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ ಅವರ ಮನೆಗೆ ಶನಿವಾರ ಭೇಟಿ ನೀಡಿ, ಮೃತ ನವೀನ್ ಭಾವಚಿತ್ರಕ್ಕೆ ಪುಷ್ಪಾರ್ಚನೆಮಾಡಿ ಗೌರವ ಸಲ್ಲಿಸಿದರು. ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಸರ್ಕಾರದ ವತಿಯಿಂದ ರೂ.25 ಲಕ್ಷಗಳ ನೆರವಿನ ಚೆಕ್ ವಿತರಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

