Breaking News

ಅಧಿವೇಶನ ನಂತರ ದೆಹಲಿಗೆ ಪ್ರವಾಸ : ಬೊಮ್ಮಾಯಿ


ಹುಬ್ಬಳ್ಳಿ: ಕಳಸಾ ಬಂಡೂರಿ ನಾಲಾ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮೋದನೆ ಪಡೆಯಲು ವಿಶೇಷ ಯತ್ನ ಕೈಗೊಂಡಿದ್ದು, ಈ ಸಂಬಂಧ ಅಧಿವೇಶನ ನಂತರ ದೆಹಲಿಗೆ ಹೋಗುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ನ್ಯಾಯಾಧೀಕರಣದಿಂದ ಹಂಚಿಕೆಯಾದ ನಮ್ಮ ಪಾಲಿನ ನೀರು ಬಳಕೆಗೆ ಯಾವುದೇ ಅಡ್ಡಿಯಾಗದು. ನಮ್ಮ ಡಿಪಿಆರ್ ಮಾದರಿಯಲ್ಲಿ ಕಾಮಗಾರಿ ಕೈಗೊಳ್ಳಲಾಗುವುದು. ಮಹದಾಯಿ ನದಿ ನೀರು ಹಂಚಿಕೆ ಬಗ್ಗೆ ಮೂರು ರಾಜ್ಯಗಳ ವ್ಯಾಜ್ಯ ಸುಪ್ರೀಂ ಕೋರ್ಟ್ ನಲ್ಲಿ ಇದೆ. ಅದು ಕಳಸಾ ಬಂಡೂರಿಗೆ ಅಡ್ಡಿಯಾಗದು. ಮುಂದಿನ ತಿಂಗಳ ಅಂತ್ಯದ ವೇಳೆಗೆ ಅನುಮೋದನೆ ದೊರೆಯುವ ವಿಶ್ವಾಸವಿದೆ. ಯೋಜನೆಗೆ ಆಯವ್ಯಯದಲ್ಲಿ 1000 ಕೋಟಿ ರೂ ತೆಗೆದಿರಿಸಿರುವುದು ದೊಡ್ಡ ನೆಗೆತ ಎಂದರು.

Share News

About admin

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *