ಬೆಂಗಳೂರು:ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಉತ್ತರ ಪ್ರದೇಶದ ಅಯೋಧ್ಯೆಯಿಂದ ಹನುಮಂತನ ಜನ್ಮಸ್ಥಳ ಅಂಜನಾದ್ರಿ ಬೆಟ್ಟಕ್ಕೆ ವಿಮಾನ ಹಾಗೂ ರೈಲಿನ ಮೂಲಕ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ.ಇದರ ಸಾಕಾರಕ್ಕಾಗಿ ಶೀಘ್ರದಲ್ಲಿ ಯೋಜನೆ ರೂಪಿಸಾಗುವುದು ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.
ಮತ್ತೇ ಮುಂದು ವರೆದಯ ಮಾತನಾಡಿದ ಅವರು,ಹನುಮನ ಜನ್ಮಸ್ಥಳ ಅಂಜನಾದ್ರಿಯ ಸಮಗ್ರ ಅಭಿವೃದ್ದಿಯ ದೃಷ್ಟಿಯಿಂದ ಈಗಾಗಲೇ ಮಾನ್ಯ ಮುಖ್ಯಮಂತ್ರಿಗಳು 100 ಕೋಟಿ ರೂಪಾಯಿಗಳ ವಿಶೇಷ ಅನುದಾನವನ್ನು ಬಜೆಟ್ನಲ್ಲಿ ಘೋಷಿಸಿದ್ದಾರೆ. ಮುಜರಾಯಿ ಇಲಾಖೆಯ ವತಿಯಿಂದ ಫೆಬ್ರವರಿ 22 ರಂದು ದೈವ ಸಂಕಲ್ಪ ಯೋಜನೆಯನ್ನು ಪ್ರಾರಂಭಿಸಲಾಗಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news

