ವಿಧಾನಸಭೆ: ಈಗಲ್ಟನ್ ರೆಸಾರ್ಟ್ ಅಕ್ರಮವಾಗಿ ಸ್ಥಾಪಿಸಲಾಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ವಿಚಾರದಲ್ಲಿ ಸದನದಲ್ಲಿ ಮಾತನಾಡುವ ಸಂದರ್ಭದಲ್ಲಿ ಹೇಳಿದ ಅವರು, ನಾನು ಯಾರ ಪರವಾಗಿಯೂ ಇಲ್ಲ ವಾಸ್ತವದ ಪರವಾಗಿ ಮಾತನಾಡುತ್ತೇನೆ. ಯಾರಿಗೆ ಅನ್ಯಾಯವಾದಾಗ ಧ್ವನಿ ಎತ್ತುವ ಸ್ವಭಾವ ಬೆಳೆಸಿಕೊಂಡಿದ್ದೇನೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾನು ಇನ್ನು ಮುಂದೆ ತಾಜ್ ವೆಸ್ಟೆಂಡ್ನಲ್ಲಿ ವಾಸ ಮಾಡುವುದಿಲ್ಲ. ಇನ್ನು ಮುಂದೆ ಏನಿದ್ದರೂ, ಕರ್ಮ ಭೂಮಿ ರಾಮನಗರದ ಕೇತಗಾನಹಳ್ಳಿಯಲ್ಲಿ ವಾಸ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

