ಬೆಂಗಳೂರು: ಸಭಾಪತಿಗಳ ವಿರುದ್ಧ ಎಫ್ಐಆರ್ ದಾಖಲಿಸುವ ಮೂಲಕ ಪೀಠಕ್ಕೆ ಅಪ ಮಾನ ಮಾಡಿದ್ದಾರೆ. ಸಕ್ಷಮ ಪ್ರಾಧಿಕಾರದ ಅನುಮತಿ ಕೂಡಾ ಪಡೆಯದಿಲ್ಲಾ ತಪ್ಪಿತಸ್ಥ ಅಧಿಕಾರಿಯನ್ನು ತತ್ಕ್ಷಣ ಅಮಾನತು ಗೊಳಿಸಬೇಕು ಎಂದು ವಿಪಕ್ಷಗಳು ಪಟ್ಟು ಹಿಡಿದ ಘಟನೆ ನಡೆಯಿತು.
ಬಜೆಟ್ ಮೇಲೆ ಭಾಷಣದ ವೇಳೆ ವಿಷಯ ಪ್ರಸ್ತಾವಿಸಿದ ಕಾಂಗ್ರೆಸ್ನ ಯು. ಬಿ. ವೆಂಕಟೇಶ್, “ಅತ್ತ ನೀರಿಗಾಗಿ ಪಾದಯಾತ್ರೆ ನಡೆಸುವವರ ವಿರುದ್ಧ ಎಫ್ಐಆರ್ ದಾಖಲಿಸಲಾಗುತ್ತದೆ. ಇತ್ತ ಸಭಾಪತಿಗಳ ವಿರುದ್ಧವೇ ಅನುಮತಿ ಪಡೆಯದೆ ಎಫ್ಐಆರ್ ದಾಖಲಾಗುತ್ತದೆ. ಅಂತಹ ಅಧಿಕಾರಿ ವಿರುದ್ಧ ಸರಕಾರ ಕ್ರಮವನ್ನೂ ಕೈಗೊಳ್ಳುವುದಿಲ್ಲ. ತಾವೂ (ಸಭಾಪತಿಗಳು) ಭೀಷ್ಮನ ದಯಾ ಮರಣದಂತೆ ಕಾಯುತ್ತಿದ್ದೀರಿ ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

