ಬೆಂಗಳೂರು: ಮೇಕೆದಾಟು ಪಾದಯಾತ್ರೆ ಸಂದರ್ಭದಲ್ಲಿ ಶಾಸಕ ಬಿ.ಆರ್.ಪಾಟೀಲ್ ಅವರಿಗೆ ನಾನು ತಮ್ಮನ್ನು ತಳ್ಳಿ ಅವಮಾನ ಮಾಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಅದಕ್ಕೆ ನಾನು ವಿಷಾದ ಕೋರುತ್ತೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಇಂತಹ ಘಟನೆ ನಡೆದಿರುವುದು ನನಗೆ ಅರಿವಿಲ್ಲ. ಜನರ ನೂಕುನುಗ್ಗಲಿನಲ್ಲಿ ಅಂತಹ ಅಚಾತುರ್ಯ ನಡೆದಿದ್ದರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ತಮ್ಮಂತಹ ಹಿರಿಯ ನಾಯಕರಿಗೆ ಅವಮಾನ ಮಾಡುವುದನ್ನು ಊಹಿಸಲು ಸಾಧ್ಯವಿಲ್ಲ ಎಂದು ಪಾಟೀಲ್ಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

