Breaking News

ಕುಮಾರಸ್ವಾಮಿ ಕುರಿತು ಟೀಕೆ ಮಾಡಿದ‌ ಡಿ.ಕೆ. ಸುರೇಶ್‌



ರಾಮನಗರ: ಈಗಲ್‌ಟನ್ ರೆಸಾರ್ಟ್‌ ವಿವಾದದ ಬಗ್ಗೆ ಸದನದಲ್ಲಿ ಕುಮಾರಸ್ವಾಮಿ-ಸಿದ್ದರಾಮಯ್ಯ ನಡುವಿನ ವಾಗ್ವಾದ ಕುರಿತು ಶುಕ್ರವಾರ ಇಲ್ಲಿ ಪತ್ರಕರ್ತರಿಗೆ ಅವರು ಪ್ರತಿಕ್ರಿಯೆ ನೀಡಿದ ಸಂಸದ ಡಿ.ಕೆ. ಸುರೇಶ್‌, ‘ಈಗಲ್‌ಟನ್‌ ಪರವಾಗಿ ಮಾತನಾಡುವ ಮೂಲಕ ಎಚ್.ಡಿ. ಕುಮಾರಸ್ವಾಮಿ ಅವರ ನಿಜವಾದ ಬಣ್ಣ ಬಯಲಾಗಿದೆ’ ಎಂದು  ಲೇವಡಿ ಮಾಡಿದರು.

‘ದಂಡ ಹೆಚ್ಚಾಗಿ ಹಾಕಿರುವುದಕ್ಕೆ ಅವರಿಗೆ ಏನು ತೊಂದರೆ ಆಗಿದೆಯೋ ಗೊತ್ತಿಲ್ಲ. ಸರ್ಕಾರ ಹಾಗೂ ಜಿಲ್ಲಾಧಿಕಾರಿ ಸೇರಿ ಕಾನೂನಿನ ಪ್ರಕಾರ ದಂಡ ನಿಗದಿ ಮಾಡಿದ್ದಾರೆ. ರೆಸಾರ್ಟ್‌ನವರು ಯಾವ ದರದಲ್ಲಿ ಸೈಟ್‌ ಮಾಡಿ ಮಾರಿದ್ದರೂ ಅದರ ಆಧಾರದ ಮೇಲೆ ದಂಡ ನಿಗದಿಪಡಿಸಿದ್ದಾರೆ. ಇದರಲ್ಲಿ ನಮ್ಮ ಪಕ್ಷ-ನಾಯಕರ ಪಾತ್ರ ಏನೂ ಇಲ್ಲ ‘ ಎಂದರು.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *