ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಅವರ ರಾಜೀನಾಮೆ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಸಿ.ಎಂ.ಇಬ್ರಾಹಿಂ ಅವರ ರಾಜೀನಾಮೆ ಪತ್ರ ನನಗೆ ತಲುಪಿಲ್ಲ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಅವರ ರಾಜೀನಾಮೆ ಪತ್ರ ನನಗೆ ತಲುಪಿಲ್ಲ. ಪತ್ರ ಬಂದ ಬಳಿಕ ಈ ಬಗ್ಗೆ ಮಾತನಾಡುತ್ತೇನೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಶನಿವಾರ ಸಿ.ಎಂ ಇಬ್ರಾಹಿಂ ಹೇಳಿದ್ದರು. ಸಿದ್ದರಾಮಯ್ಯನವರಿಗೂ ರಾಜೀನಾಮೆ ಪತ್ರ ಕಳುಹಿಸಿದ್ದೇನೆ ಎಂದಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

