ಬೆಂಗಳೂರು : ‘ಪ್ರಧಾನಿ ನರೇಂದ್ರ ಮೋದಿ ಇಲ್ಲದಿದ್ದರೆ ಹೆಚ್ಚಿನ ಭಾರತೀಯ ವಿದ್ಯಾರ್ಥಿಗಳು ಉಕ್ರೇನ್ ನಲ್ಲಿಸಾವನ್ನಪ್ಪುತ್ತಿದ್ದರು’ ಎಂದು ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದರು.
ಯುದ್ಧಪೀಡಿತ ಉಕ್ರೇನ್ʼನಲ್ಲಿ ಭಾರತದ ಸ್ಥಳಾಂತರ ಪ್ರಯತ್ನವಾದ ಆಪರೇಶನ್ ಗಂಗಾ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸೂರ್ಯ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಈ ವೇಳೆ ‘19,000 ವಿದ್ಯಾರ್ಥಿಗಳಲ್ಲಿ ನಾವು ಕೇವಲ ಒಬ್ಬ ನವೀನ್ ಅವರನ್ನ ಕಳೆದುಕೊಂಡಿದ್ದೇವೆ. ಸ್ಥಳಾಂತರ ಸರಿಯಾಗಿ ನಡೆಯದಿದ್ದರೆ, ನಾವು ಹೆಚ್ಚು ನವೀನ್ʼರನ್ನ ಕಳೆದುಕೊಳ್ಳಬೇಕಿತ್ತು. ಮೋದಿ ಮತ್ತು ಸರ್ಕಾರದ ಪ್ರಯತ್ನಗಳಿಂದಾಗಿ ಅದು ಸಂಭವಿಸಲಿಲ್ಲ. ಇದನ್ನ ನೋಡುವ ಪ್ರಾಮಾಣಿಕತೆ ಜನರಿಗೆ ಇರಬೇಕು’ ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

