Breaking News

ಬುದ್ದಿವಾದ ಹೇಳಿದ ಪಾಲಕರು, ಆತ್ಮಹತ್ಯೆ ಶರಣಾದ ಮಗ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಮಕ್ಕಳ್ಳಿಗೆ ಪಾಲಕರು ಬುದ್ದಿವಾದ ಹೇಳುವುದೇ ಕಷ್ಟವಾಗಿದೆ. ಮಾತಾನಾಡುವ ಮುಂಚೆ ಸಾವಿರಾರು ಸಾರಿ ಯೋಚನೆ ಮಾಡುವ ಪರಿಸ್ಥಿತಿ ಉಂಟಾಗಿದೆ. ತಾಯಿ ಬೈದಿದಕ್ಕೆ ಮಗ ನೇಣಿಗೆ ಶರಣಾಗಿರುವ ಘಟನೆ ಸುಂಕದಕಟ್ಟೆ ಬಳಿಯ ಶ್ರೀನಿವಾಸ್ ನಗರದ ಪೈಪ್ ಲೈನ್ ರಸ್ತೆಯ ಮನೆಯಲ್ಲಿ ನಡೆದಿದೆ.

ಸಂಜಯ್ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದು, ಕಳೆದ ಮೂರು ದಿನಗಳಿಂದ ಮಗ ಸಂಜಯ್ ಮನೆಗೆ ಬಂದಿರಲಿಲ್ಲ.

ಯಾವುದೇ ಕೆಲಸಕ್ಕೆ ಹೋಗದೆ ಅಲೆದಾಡುತ್ತಿದ್ದ. ಹೀಗಾಗಿ ತಂದೆ ತಾಯಿ ಮಗ ಸಂಜಯ್ ಗೆ ಬೈಯ್ದು ಬುದ್ದಿವಾದ ಹೇಳಿದ್ದರು. ಬುದ್ದಿವಾದ ಹೇಳಿದ್ದಕ್ಕೆ ತಾಯಿಯನ್ನು ಬೈದು ಹಲ್ಲೆಗೆ ಮುಂದಾಗಿದ್ದ. ಈ ವೇಳೆ ತಂದೆ ತಡೆದು ಮಗನಿಗೆ ಏಟು ಕೂಡ ಒಡೆದಿದ್ದರು. ಇದರಿಂದ ಬೇಜಾರಾಗಿದ್ದ ಸಂಜಯ್, ರಾತ್ರಿ ಎಲ್ಲಾ ಮಲಗಿದ್ದ ವೇಳೆ ನೇಣಿಗೆ ಶರಣಾಗಿದ್ದಾನೆ. ಈ ಸಂಬಂಧ ಕಾಮಾಕ್ಷಿ ಪಾಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯುಡಿಆರ್ ಅಡಿ ಪ್ರಕರಣ ದಾಖಲಾಗಿದೆ.

Share News

About admin

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *