ದೊಡ್ಡಬಳ್ಳಾಪುರ : ಕಾಲೇಜ್ಗೆ ತೆರಳುತ್ತಿದ್ದ ತಂದೆ-ಮಗನ ಬೈಕ್ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಅಪ್ಪನ ಎದುರೇ ಮಗ ವಿಲವಿಲ ಒದ್ದಾಡಿ ಪ್ರಾಣ ಬಿಟ್ಟ ಘಟನೆ ನಡೆದಿದೆ.
ದೊಡ್ಡಬಳ್ಳಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 207ರ ಚುಂಚೇಗೌಡನ ಹೊಸಹಳ್ಳಿ ಗೇಟ್ ಬಳಿ ಈ ರಸ್ತೆ ಅಪಘಾತ ನಡೆದಿದ್ದು, ಅಂಬಲಗೆರೆಯ ನಿವಾಸಿ ವರುಣ್ (18) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತಂದೆ ಸಿದ್ದಲಿಂಗಪ್ಪ (54) ಗಾಯಗೊಂಡಿದ್ದಾರೆ.
ಮೃತ ಯುವಕ ದೊಡ್ಡಬಳ್ಳಾಪುರ ನಗರದ ಶ್ರೀವಾಣಿ ಕಾಲೇಜ್ನಲ್ಲಿ ವ್ಯಾಸಂಗ ಮಾಡುತ್ತಿದ್ದ. ಇಂದು ಬೆಳಗ್ಗೆ ಕಾಲೇಜಿಗೆ ತನ್ನ ತಂದೆಯ ಜೊತೆ ಬೈಕ್ನಲ್ಲಿ ಬರುತ್ತಿದ್ದಾಗ ಮುಂಭಾಗದಿಂದ ಬಂದ ಕ್ಯಾಂಟರ್ ಏಕಾಏಕಿ ಡಿಕ್ಕಿ ಹೊಡೆದಿದೆ. ಅಪಘಾತದ ನಂತರ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ ಚಾಲಕನನ್ನ ಗ್ರಾಮಸ್ಥರು ಹಿಡಿದು ಪೊಲೀಸ್ ವಶಕ್ಕೆ ನೀಡಿದ್ದಾರೆ. ಈ ಕುರಿತು ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

