ಬೆಂಗಳೂರು: ಸಭಾಪತಿ ಬಸವರಾಜ ಹೊರಟ್ಟಿ ವಿರುದ್ಧ ಎಫ್ಐಆರ್ ದಾಖಲಿಸಿದ್ದನ್ನು ಗಂಭೀರವಾಗಿ ಪರಿಗಣಿಸಿದ್ದು, ಮುಂದೆ ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗು ವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ಶಿಷ್ಟಾಚಾರದ ಪ್ರಕಾರ ಸಭಾಪತಿ ಸ್ಥಾನ ಉನ್ನತವಾದುದು. ಸಾಂವಿಧಾನಿಕ ಹುದ್ದೆಗಳಲ್ಲಿರುವವರ ವಿರುದ್ಧ ದೂರು ದಾಖಲಿಸು ವಾಗ ಅದಕ್ಕೂ ಮೊದಲು ಕೆಲವು ಪ್ರಕ್ರಿಯೆ ಅನುಸರಿಸಬೇಕು. ಹೊರಟ್ಟಿ ಅವರ ಪ್ರಕರಣದಲ್ಲಿ ಯಾವುದೂ ಪಾಲನೆಯಾಗದೇ ಲೋಪಗಳಾಗಿದ್ದು, ಮೇಲ್ನೋಟಕ್ಕೆ ದೃಢಪಟ್ಟಿದೆ. ಹೀಗಾಗಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

