Breaking News

ಸುತ್ತೂರು ಮಠದ ಸ್ವಾಮೀಜಿಗೆ ಮನವಿ ಮಾಡಿದ ಪ್ರಜ್ವಲ್ ರೇವಣ್ಣ


ಹಾಸನ: ಸುತ್ತೂರು ಮಠದ ಸ್ವಾಮೀಜಿ ಅವರು ಬರೀ ರೇವಣ್ಣ ಅವರ ಮೇಲೆ ಪ್ರೀತಿ ಇದ್ದರೆ ಸಾಲದು. ಅವರ ಮಗನ ಮೇಲೂ ಒಂದಷ್ಟು ಪ್ರೀತಿ, ಆಶೀರ್ವಾದ ಇದ್ದರೆ ಮುಂದಿನ ದಿನಗಳಲ್ಲಿ ನಾನೂ ಕೂಡ ಬೆಳೆಯಲು ಒಳ್ಳೆಯದಾಗುತ್ತೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಮನವಿ ಮಾಡಿದರು.

ಹೊಳೆನರಸೀಪುರ ತಾಲೂಕಿನ ಟಿ.ಮಾಯಗೌಡನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಶ್ರೀನಂಜುಂಡೇಶ್ವರ ದೇವಾಲಯ ಉದ್ಘಾಟನೆ ಹಾಗೂ ವಿಗ್ರಹ ಪ್ರತಿಷ್ಠಾಪನೆ ಮತ್ತು ಧಾರ್ಮಿಕ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಆಗಮಿಸಿದ ಪ್ರಜ್ವಲ್​ ಭಾಷಣ ಮಾಡುತ್ತಾ, ಇವತ್ತು ನನ್ನದು ಅದೆಂಥಾ ಪುಣ್ಯ ನೋಡಿ.
ಶಿವನ ದೇವಸ್ಥಾನಕ್ಕೆ ಹೋಗಬೇಕು ಅಂದುಕೊಂಡಿದ್ದೆ. ಆದರೆ ಇವತ್ತು ದೇವರೇ ನನ್ನನ್ನು ಇಲ್ಲಿ ಕರೆಸಿಕೊಂಡು ಆಶೀರ್ವಾದಿಸಿದೆ. ಇಂತಹ ಒಳ್ಳೆಯ ಕಾರ್ಯಕ್ರಮಕ್ಕೆ ನನ್ನನ್ನು ಬರಮಾಡಿಕೊಂಡಿದ್ದೀರಿ ಎಂದರು.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *