Breaking News

ನವೀನ್ ದೇಹವನ್ನು ದಾನ ಮಾಡಲು ಕುಟುಂಬಸ್ಥರು ತೀರ್ಮಾನ


ರಾಉಕ್ರೇನ್ ನಲ್ಲಿ ರಷ್ಯಾ ದಾಳಿಗೆ ಮೃತ ಪಟ್ಟ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿ ಗ್ರಾಮದ ವೈದ್ಯಕೀಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಮೃತದೇಹವನ್ನು ದಾವಣಗೆರೆಯ ಎಸ್‌.ಎಸ್‌.ಆಸ್ಪತ್ರೆಗೆ ದಾನ ಮಾಡಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ.

ಈ ಕುರಿತು ಮಾತನಾಡಿದ ನವೀನ ಗ್ಯಾನಗೌಡರ ತಂದೆ ಶೇಖರಪ್ಪ, ” ಪಾರ್ಥಿವ ಶರೀರ ಸೋಮವಾರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರಿಗೆ ತಲುಪಿ, 9 ಗಂಟೆಗೆ ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿ ಗ್ರಾಮಕ್ಕೆ ಮಗನ ಪಾರ್ಥಿವ ಶರೀರ ತಲುಪುತ್ತದೆ. ನಂತರ ವೀರಶೈವ ಪದ್ಧತಿ ಪ್ರಕಾರ ಪೂಜಾ ಕಾರ್ಯ ನೆರವೇರಿಸಿ ಸಂಜೆವರೆಗೂ ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು” ಎಂದರು.

Share News

About admin

Check Also

ವೆಂಕಟಗಿರಿಕೋಟೆ ಗಲಾಟೆ 7 ಮಂದಿ ವಿರುದ್ಧ ಪ್ರಕರಣ

ಚಿಂತಾಮಣಿ: ನಗರದ ವೆಂಕಟಗಿರಿಕೋಟೆ ಬಡಾವಣೆಯಲ್ಲಿ ಏ.13ರಂದು ಸಂಜೆ ಕೈಕೈ ಮಿಲಾಯಿಸಿದವರನ್ನು ಗಸ್ತಿನಲ್ಲಿದ್ದ ಪೊಲೀಸರು ತಡೆದು ಬುದ್ಧಿ ಹೇಳಿದರೂ ಕೇಳದೆ ಮುಂದುವರಿದು …

Leave a Reply

Your email address will not be published. Required fields are marked *