ಬೆಂಗಳೂರು : ಮಾರ್ಚ್ 28 ರಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷನಾಗಿ ಅಧಿಕಾರ ಸ್ವೀಕರಿಸುತ್ತೇನೆ.ಸೋನಿಯಾ ಗಾಂಧಿ,ರಾಹುಲ್ ಗಾಂಧಿ, ನಮ್ಮ ವರಿಷ್ಠರು ನನಗೆ ಅವಕಾಶ ಕೊಟ್ಟು,ನೇಮಿಸಿದ್ದಾರೆ.ಖರ್ಗೆ ಸೇರಿ ಎಲ್ಲರೂ ಬೆಂಬಲ ಸೂಚಿಸಿದ್ದಾರೆ ಎಂದು ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಅರಮನೆ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಪ್ರಚಾರ ಸಮಿತಿಯನ್ನ ನಾವು ಬಲಪಡಿಸಬೇಕಿದೆ. ರಾಜ್ಯ,ಜಿಲ್ಲಾ ಮಟ್ಟದಲ್ಲಿ ಸಮಿತಿ ರಚಿಸಬೇಕಿದೆ. 5 ವರ್ಷ ಜಲಸಂಪನ್ಮೂಲ ಸಚಿವನಾಗಿದ್ದೆ. ಗೃಹ ಸಚಿವನಾಗಿಯೂ ನಾನು ಕೆಲಸ ಮಾಡಿದ್ದೇನೆ. ಎಲ್ಲರನ್ನ ಒಟ್ಟಾಗಿ ಜೋಡಿಸಿಕೊಂಡು ಹೋಗುತ್ತೇನೆ .ಪ್ರಚಾರವನ್ನ ರೂಪಿಸುವ ಬಗ್ಗೆ ಗಮನಹರಿಸುತ್ತೇವೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

