Breaking News

ಬಿಜೆಪಿ, ಕಾಂಗ್ರೆಸ್ ರಾಷ್ಟ್ರೀಯ ಪಕ್ಷಗಳಿಗೆ ಜನತೆಯೇ ತಕ್ಕ ಪಾಠಕಲಿಸಬೇಕು : ಕುಮಾರಸ್ವಾಮಿ


ಚನ್ನಪಟ್ಟಣ: ಬಿಜೆಪಿ, ಕಾಂಗ್ರೆಸ್ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಜನತೆಯೇ ತಕ್ಕ ಪಾಠಕಲಿಸಬೇಕು. ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ಮತಸೆಳೆಯಲು ಮುಂದಾಗಿವೆ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟರು.

ತಾಲೂಕಿನ ಕದರಮಂಗಲ ಗ್ರಾಮದ ಕಂಬದ ನರಸಿಂಹಸ್ವಾಮಿ ಬೆಟ್ಟದಲ್ಲಿ ನಡೆದ ಜಾತ್ರಾಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು, ಸುದ್ದಿಗಾರರ ಜೊತೆ ಮಾತನಾಡಿ, ಭಗವದ್ಗೀತೆಯನ್ನು ಪಾಠಮಾಡಿದರೆ ಮಕ್ಕಳ ಹೊಟ್ಟೆತುಂಬುತ್ತದೆಯೇ, ಸರ್ಕಾರ ಇಂತಹ ವಿಚಾರಗಳನ್ನು ದೊಡ್ಡದು ಮಾಡುವುದನ್ನು ಬಿಟ್ಟಿ, ತಮ್ಮ ಮುಂದಿರುವ ಟನ್‌ಗಟ್ಟಲೆ ಸಮಸ್ಯೆಗಳನ್ನು ಬಗೆಹರಿಸುವತ್ತ ಗಮನಹರಿಸಲಿ ಎಂದು ಸಲಹೆ ನೀಡಿದರು.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *