ಮೈಸೂರು: ಈ ಬಾರಿಯ ರಂಗೋತ್ಸವದ ಎಲ್ಲ ಕಾರ್ಯಕ್ರಮಗಳು ‘ತಾಯಿ’ ಪರಿಕಲ್ಪನೆಯಡಿ ನಡೆದಿತ್ತು. ‘ತಾಯಿ ವಿಷಯವನ್ನಾಧರಿಸಿ ರೂಪಿಸಲಾದ ರಂಗೋತ್ಸವದಲ್ಲಿ ಹೆಣ್ಣಿನ ಬಗ್ಗೆ ಈ ರೀತಿಯ ಮಾತುಗಳನ್ನಾಡಿದ್ದು ಹೇಗೆ’ ಎಂದು ಹಲವರು ಪ್ರಶ್ನಿಸಿದ್ದಾರೆ.
ತುಚ್ಛವಾಗಿ ಮಾತನಾಡುವ ಈ ನೀಚ ತಾನು ಪೂಜೆ ಮಾಡುವ ಕೋದಂಡರಾಮ ದೇವಾಲಯದಲ್ಲಿ ರಾಮನ ಜೊತೆ ನಿಂತಿರುವ ಸೀತೆಯನ್ನು ಯಾವ ದೃಷ್ಟಿಯಿಂದ ನೋಡುತ್ತಿರಬಹುದು?’ ಎಂದು ಶಶಿಧರ ಹೆಮ್ಮಾಡಿ ಪ್ರಶ್ನಿಸಿದ್ದಾರೆ.
‘ಕಣ್ಣನ್ ಅವರು, ಹಿಜಾಬ್ ಹಾಕಿಕೊಂಡು ಕಾಲೇಜಿಗೆ ಬರುವ ಹೆಣ್ಣು ಮಕ್ಕಳ ಬಗ್ಗೆ ತುಚ್ಛವಾದ ಶಬ್ದ ಬಳಸಿದ ಬಗ್ಗೆ ಓದಿದೆ. ಅವರಿಗೂ ಹೆಣ್ಣು ಮಕ್ಕಳು ಇರಬೇಕು. ಪ್ರಶ್ನೆಯೆಂದರೆ, ಎಲ್ಲಿಂದ ಹುಟ್ಟುತ್ತಿದೆ ಈ ಅಮಾನುಷ ಕಿಲುಬು, ಕ್ಷುದ್ರತೆ? ಕಲೆ ನುಡಿಯನ್ನು ಸಂವೇದನಶೀಲಗೊಳಿಸಬೇಕು. ಬದಲಿಗೆ ಮಲಿನಗೊಳಿಸುತ್ತಿದೆ’ ಎಂದು ವಿಮರ್ಶಕ ರಹಮತ್ ತರೀಕೆರೆ ವಿಷಾದಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

