ಬೆಂಗಳೂರು: ಎರಡು ಸಿಮೆಂಟ್ ಲಾರಿಗಳು ಡಿಕ್ಕಿಯಾದ ಪರಿಣಾಮ ಲಾರಿಗಳು ಹೊತ್ತುಕೊಂಡು ಉರಿದ ಘಟನೆ ದೇವನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ನಡೆದಿದೆ.
ಬೆಂಕಿಯಲ್ಲಿ ಚಾಲಕನೊಬ್ಬ ಸಜೀವ ದಹನವಾಗಿರುವ ದುರ್ಘಟನೆ ನಡೆದಿದೆ. ಭುಕ್ತಿ ಡಾಬಾ ಬಳಿ ಸಂಭವಿಸಿದ ಅಪಘಾತದಲ್ಲಿ ಎರಡೂ ಸಿಮೆಂಟ್ ಸಾಗಣೆ ಲಾರಿಗಳು ಹೊತ್ತಿ ಉರಿದವು. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಯತ್ನಿಸಿದರು.
ಓರ್ವ ಚಾಲಕನನ್ನು ಸ್ಥಳೀಯರು ರಕ್ಷಿಸಿದರು. ಆದರೆ ಮತ್ತೋರ್ವ ಚಾಲಕ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಮೃತಪಟ್ಟ. ಅಪಘಾತ ಮತ್ತು ಬೆಂಕಿಯಿಂದಾಗಿ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಸುಮಾರು 3 ಕಿಮೀಯಷ್ಟು ದೂರ ಟ್ರಾಫಿಕ್ ಜಾಮ್ ಆಗಿತ್ತು. ಸಂಚಾರ ನಿಯಂತ್ರಿಸಲು ಟ್ರಾಫಿಕ್ ಪೊಲೀಸರ ಹರಸಾಹಸಪಟ್ಟರು.
bigtvnews | Hubli Dharwad News | Kannada News | Karnataka News Hubli News | News In Hubli | Local news

