ಹುಬ್ಬಳ್ಳಿ: ವಿಶ್ವ ರಂಗಭೂಮಿ ದಿನಾಚರಣೆ, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಚೇತನ್ ಫೌಂಡೇಶನ್ ವಾರ್ಷಿಕೋತ್ಸವ ಅಂಗವಾಗಿ ಇದೇ ದಿ. ೨೭ ರಂದು ನಗರದ ದೇಶಪಾಂಡೆ ನಗರದ ಸವಾಯಿ ಗಂಧರ್ವ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಸಮಾಜ ಸೇವೆಯನ್ನು ಪರಿಗಣಿಸಿ ಡಾ. ಪುನೀತ್ ರಾಜ್ಕುಮಾರ್ ನೆನಪಿನಲ್ಲಿ ನೀಡಲಾಗುತ್ತಿರುವ ಪ್ರಸಕ್ತ ಸಾಲಿನ ರಾಜರತ್ನ ಪ್ರಶಸ್ತಿಗೆ ಸಮಾಜ ಸೇವಕ ಹಾಗೂ ವಿಶ್ವಮಾನ್ಯ ಪ್ರಶಸ್ತಿ ಪುರಸ್ಕೃತರಾದ ಸಂತೋಷ ಆರ್. ಶೆಟ್ಟಿ ಅವರು ಭಾಜನರಾಗಿದ್ದಾರೆ.
ಈ ಪ್ರಶಸ್ತಿಯು ಪುನೀತ್ ರಾಜ್ಕುಮಾರ್ ಅವರ ಪುತ್ಥಳಿ,, ಪ್ರಶಸ್ತಿ ಫಲಕ. ಹಾಗೂ ಪುನೀತ್ ಅವರ ಜೀವನ ಕಥನ ನೀನೇ ರಾಜಕುಮಾರ್ ಪುಸ್ತಕವನ್ನೊಳಗೊಂಡಿರುತ್ತದೆ ಎಂಬುದು ವಿಶೇಷ ಎಂದು ಚೇತನ್ ಫೌಂಡೇಶನ್ ಅಧ್ಯಕ್ಷ ಚಂದ್ರಶೇಖರ ಮಾಡಲಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

