ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರಗಿರುವ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರಿಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಯುನೈಟೆಡ್ ಅರಬ್ ಎಮಿರೇಟ್ಸ್ಗೆ ತೆರಳಲು ದೆಹಲಿ ಹೈಕೋರ್ಟ್ ಅನುಮತಿ ನೀಡಿದೆ.
ಶಿವಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿಗಳಾದ ಆಶಾ ಮೆನನ್, ‘ಅರ್ಜಿದಾರರಿಗೆ ಮಾ. 31 ರಿಂದ ಏ. 6 ರ ನಡುವೆ ದುಬೈ ಮತ್ತು ಅಬುಧಾಬಿಗೆ ಪ್ರಯಾಣಿಸಲು ಅವಕಾಶವಿದೆ. ಅಲ್ಲಿಂದ ಹಿಂದಿರುಗಿದ ವಿಚಾರವನ್ನು ತನಿಖಾಧಿಕಾರಿಗೆ ತಿಳಿಸುತ್ತಾರೆ’ ಎಂದು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

