ಧಾರವಾಡ: ನಗರದಲ್ಲಿ ನಿನ್ನೆ ತಡರಾತ್ರಿ ಕಳ್ಳತನ ನಡೆದಿದ್ದು . ಕೆಲಗೇರಿಯ ಆಂಜನೇಯ ನಗರದಲ್ಲಿ ಸರಣಿ ಕಳ್ಳತನ ನಡೆದಿದ್ದು , ಮೂರ್ನಾಲ್ಕು ಮನೆಗಳಿಗೆ ಕಳ್ಳರು ಕನ್ನ ಹಾಕಿ ಅಪಾರ ಪ್ರಮಾಣದ ನಗದು ಹಣ, ಚಿನ್ನ, ಬೆಳ್ಳಿಯ ಆಭರಣಗಳನ್ನು ದೊಚಿಕೊಂಡು ಹೋದ ಘಟನೆ ನಡೆದಿದೆ.
ಆಂಜನೇಯ ನಗರದ 4 ನೇ ಕ್ರಾಸ್ನಲ್ಲಿರುವ ಪ್ರಕಾಶ್ ದೊಡ್ಡಮನಿ ಎಂಬ ಸಿಆರ್ಪಿಎಫ್ ಪೊಲೀಸ್ ಮನೆಯಲ್ಲಿ ಮೊದಲು ಕಳ್ಳರು ಕಳ್ಳತನ ಮಾಡಿದ್ದು ಇವರ ಮನೆಯಲ್ಲಿದ್ದ ಒಂದೂವರೆ ಕೆಜೆ ಬೆಳ್ಳಿ , ಚಿನ್ನ ಸೇರಿದಂತೆ 60 ಸಾವಿರ ಹಣವನ್ನು ದೋಚಿಕೊಂಡು ಹೋಗಿದ್ದಾರೆ .
ಅದೇ ಕ್ರಾಸ್ನಲ್ಲಿರುವ ಶಿವನಾಗ ಆಲದಮರ ಎಂಬುವವರ ಮನೆಗೆ ಎಂಟ್ರಿ ಕೊಟ್ಟು ಕಳ್ಳತನ ಮಾಡಲು ಪ್ರಯತ್ನಿಸಿದ್ದಾರೆ . ಮನೆಯಲ್ಲಿ ಏನೂ ಸಿಗದಿದ್ದರಿಂದ ಅಲ್ಲಿಂದ 8 ನೇ ಕ್ರಾಸ್ನಲ್ಲಿ ಬೀಗ ಹಾಕಿದ್ದ ರುದ್ರಪ್ಪ ಹನಜಿ ಅವರ ಮನೆಗೆ ಎಂಟ್ರಿ ಕೊಟ್ಟು ಅಲ್ಮೆರಾ ಒಡೆದು ಮನೆಯಲ್ಲಿನ 10 ಸಾವಿರ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

