ದೆಹಲಿ: ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರು ಇಂದು ಬೆಳಿಗ್ಗೆ 10 ಗಂಟೆಯಿಂದ ನವದೆಹಲಿಯ ತಾಲ್ಕಡೋರಾ ಕ್ರೀಡಾಂಗಣದಲ್ಲಿ ನಡೆಯುವ ಸಂವಾದದಲ್ಲಿ ಧಾರವಾಡ ಕೇಂದ್ರೀಯ ವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು ಹಾಗೂ ಓರ್ವ ಪೋಷಕರು ಆಯ್ಕೆಯಾಗಿದ್ದಾರೆ .
ಇಬ್ಬರು ವಿದ್ಯಾರ್ಥಿಗಳಾದ ಬಿ . ಮುರಳೀಧರ , ಪ್ರಣವ ಲಿಂಗದಳ್ಳಿ ಹಾಗೂ ಪಾಲಕರಾದ ಜ್ಯೋತಿ . ಬಿ.ಎನ್.ಅವರಿಗೆ ನೇರವಾಗಿ ಪ್ರಧಾನ ಮಂತ್ರಿಯವರೊಡನೆ ಸಂವಾದದಲ್ಲಿ ಭಾಗವಹಿಸಲು ಅವಕಾಶ ದೊರೆತಿದೆ . ಉಳಿದಂತೆ ಧಾರವಾಡ ಜಿಲ್ಲೆಯಲ್ಲಿ 6 ನೇ ತರಗತಿಯಿಂದ 12 ನೇ ತರಗತಿಯಲ್ಲಿ ಓದುತ್ತಿರುವ ಎಲ್ಲ ವಿದ್ಯಾರ್ಥಿಗಳು ಶಾಲಾ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ
ಜಿಲ್ಲೆಯ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಇಂಟರೈಟ್ ಸಂಪರ್ಕ ಹೊಂದಿರುವ ಕಂಪ್ಯೂಟರ್ , ಲ್ಯಾಪ್ಟಾಪ್ಗಳ ಮೂಲಕ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಿಸಲು ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಶಿಕ್ಷಕರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ .