ಬೆಂಗಳೂರು: ‘ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜು ಎದುರಿನ ರಸ್ತೆ ಮೂಲಕ ಅಮಿತ್ ಶಾ ಅವರು ಅರಮನೆ ಮೈದಾನಕ್ಕೆ ತೆರಳಬೇಕಿತ್ತು. ಆದರೆ ಮಾರ್ಗದಲ್ಲಿ ಬೆಂಕಿ ಅವಘಡ ಸಂಭವಿಸಿದ್ದರಿಂದ, ಬದಲಿ ಮಾರ್ಗದಲ್ಲಿ ಅವರ ಸಂಚಾರಕ್ಕೆ ಪೊಲೀಸರು ಅನುಕೂಲ ಮಾಡಿಕೊಟ್ಟರು.
‘ಬೆಂಕಿ ಕೆನ್ನಾಲಗೆ ಹೆಚ್ಚಾಗಿತ್ತು. ಹೊಗೆಯೂ ಜಾಸ್ತಿ ಇತ್ತು.
ಸ್ಥಳೀಯರು ಆತಂಕಗೊಂಡಿದ್ದರು. ರಸ್ತೆಯಲ್ಲಿ ಗಸ್ತಿನಲ್ಲಿದ್ದ ಪೊಲೀಸರು, ಬೆಂಕಿ ನಂದಿಸಿದರು. ಅವರು ನೀಡಿದ ಮಾಹಿತಿಯಂತೆ, ಮುಂಜಾಗ್ರತಾ ಕ್ರಮವಾಗಿ ಅಮಿತ್ ಶಾ ಅವರನ್ನು ಬದಲಿ ಮಾರ್ಗದಲ್ಲಿ ಕರೆದೊಯ್ಯಲಾಯಿತು’ ಎಂದೂ ಪೊಲೀಸ್ ಮೂಲಗಳು ತಿಳಿಸಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

