Breaking News

ನುಗ್ಗಿಕೇರಿಯಲ್ಲಿ ನಡೆದ ಅಹಿತಕರ ಘಟನೆ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು : ಕುಮಟಾಕರ್


ಧಾರವಾಡ: ಸುಮಾರು 15 ವರ್ಷಗಳಿಂದ ಧಾರವಾಡದ ನುಗ್ಗಿಕೆರಿ ಶ್ರೀ ಹನುಮಂತ ದೇವಸ್ಥಾನ ಸುತ್ತ ವ್ಯಾಪಾರ ಮಾಡುತ್ತಿದ್ದ ಮುಸ್ಲಿಂ ಅಂಗಡಿಗಳನ್ನು ಶ್ರೀ ರಾಮ ಸೇನೆ ಕಾರ್ಯಕರ್ತರು ದಬ್ಬಾಳಿಕೆ ಮಾಡಿ ಅಂಗಡಿಯಲ್ಲಿ ಇದ್ದ ಕಲ್ಲಂಗಡಿ ಹಣ್ಣುನ್ನು ನಡು ರಸ್ತೆಯಲ್ಲಿ ಒಡೆದು ಮುಸ್ಲಿಂ ಅಂಗಡಿ ವ್ಯಾಪಾರಸ್ಥರ ಮೇಲೆ ದೌರ್ಜನ್ಯವನ್ನು ಮಾಡಿರುವುದು ಖಂಡನೀಯವಾಗಿದೆ ಎಂದು ಕಾಂಗ್ರೆಸ್ ಮುಖಂಡರು ಅಶಾಕ್ ಕುಮಟಾಕರ್ ಹೇಳಿದರು .

ಅಲ್ಲದೇ ಕೂಡಲೇ ಸರ್ಕಾರ ಹಾಗೂ ಜಿಲ್ಲಾ ಆಡಳಿತ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸಿ ಶಿಕ್ಷೆ ನೀಡಬೇಕು ಒಂದು ವೇಳೆ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ಹಾಗೂ ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದರು .

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *