Breaking News

ಸ್ವಗ್ರಾಮಕ್ಕೆ ತೆರಳಿದ ಸಂತೋಷ್ ಮೃತದೇಹ : ಆರೋಪಿಯನ್ನು ಬಂಧಿಸುವವರೆಗು ಅಂತ್ಯ ಕ್ರಿಯೆ ಇಲ್ಲ

ಬೆಳಗಾವಿ: ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ‌ ಲಂಚದ ಆರೋಪ‌ ಮಾಡಿ ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಂತೋಷ್ ಪಾಟೀಲ್‌ ಮೃತದೇಹವನ್ನು ಸ್ವಗ್ರಾಮ ಬಡಸದತ್ತ ತೆಗೆದುಕೊಂಡು ಹೋಗಲಾಗುತ್ತಿದೆ.

ಕಿತ್ತೂರು ತಾಲ್ಲೂಕಿನ ಎಂ‌.ಕೆ. ಹುಬ್ಬಳ್ಳಿ ಮೂಲಕ ಬಡಸ ಗ್ರಾಮಕ್ಕೆ ಸಾಗಿಸಲಾಗುತ್ತಿದೆ. ಅಲ್ಲಿದ್ದ ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿದ ಕುಟುಂಬದವರು, ಆರೋಪಗಳನ್ನು ಬಂಧಿಸಲು ಅಗತ್ಯವಾದ ದಾಖಲೆಗಳು ಇವೆ. ನಮ್ಮ ಬಳಿಯೂ ಸಾಕಷ್ಟಿವೆ. ಅವುಗಳನ್ನು ಕೊಡಲಾಗುವುದು. ಆರೋಪಗಳನ್ನು ಬಂಧಿಸುವವರೆಗೂ ಅಂತ್ಯಕ್ರಿಯೆ ನಡೆಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಉಡುಪಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಲ್ಲಿಯವರು ತನಿಖಾ ಪ್ರಕ್ರಿಯೆ ಪೂರ್ಣಗೊಳಿಸಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದರು.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *