ಹುಬ್ಬಳ್ಳಿ: ನಗರದ ಸಿಬಿಟಿ ಶಾ ಬಜಾರ್ ನಲ್ಲಿ ಅವ್ಯವಸ್ಥೆ ತಲೆದೂರಿದೆ . ಚೆನ್ನಾಗಿದ್ದಫುಟ್ ಪಾತ್ ಅಗೆದು ಸ್ಮಾರ್ಟ್ ಸಿಟಿ ಯೋಜನೆ ಹೆಸರಲ್ಲಿ ಅವ್ಯವಸ್ಥೆ ಹುಟ್ಟು ಹಾಕಿದ್ದಾರೆ .
ಫುಟ್ ಪಾತ್ ಮೇಲೆ ಫೀವರ್ಸ್ ಹೊಂದಿಸಿ ಸ್ಮಾರ್ಟ್ ಮಾಡುತ್ತೇವೆ ಎಂದು ಗುಂಡಿ ತೆಗೆದು ಹಾಗೆಯೇ ಬಿಟ್ಟಿದ್ದು , ಸಂಜೆ ವೇಳೆಯಲ್ಲಿ ಸಂಚರಿಸುವ ಸಾರ್ವಜನಿಕರು ಗುಂಡಿಯಲ್ಲಿ ಬಿದ್ದು ಅಪಘಾತಕ್ಕೆ ತುತ್ತಾಗುತ್ತಿದ್ದಾರೆ ದಿನಕ್ಕೆ ಸಾವಿರಾರು ಜನರು ಮಾರ್ಕೆಟ್ ಹಾಗೂ ಇನ್ನಿತರ ಕೆಲಸಕ್ಕೆ ಈ ರಸ್ತೆಯಲ್ಲಿಯೇ ಸಂಚಾರ ಮಾಡುತ್ತಾರೆ . ಈ ರೀತಿ ಮಾರ್ಗ ಮಧ್ಯದಲ್ಲಿ ದೊಡ್ಡ ಪ್ರಮಾಣದ ಗುಂಡಿ ತೆಗೆದು ಹಾಗೆಯೇ ಬಿಟ್ಟಿರುವುದು ಸಾರ್ವಜನಿಕರಿಗೆ ಅಪಘಾತಕ್ಕೆ ಆಹ್ವಾನ ನೀಡುವಂತಿದೆ .