Breaking News

ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಿದ ಕೇಂದ್ರ ಸಚಿವ: ಎಲ್ಲ ವರ್ಗದ ಹಿತಕಾಯ್ದ ನಾಯಕ…!

ಹುಬ್ಬಳ್ಳಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 131ನೇ ಜಯಂತೋತ್ಸವದ ಅಂಗವಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು, ಹುಬ್ಬಳ್ಳಿಯಲ್ಲಿಂದು ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು.

ಹುಬ್ಬಳ್ಳಿಯ ಪ್ರಧಾನ ಅಂಚೆ ಕಚೇರಿಯ ಎದುರಿನಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬಳಿಕ ಮಾತನಾಡಿದ ಅವರು, ಶೋಷಿತ ವರ್ಗದ ಧ್ವನಿಯಾಗಿ ಹಾಗೂ ತಾವೇ ಶೋಷಣೆಗೆ ಒಳಗಾಗಿದ್ದರೂ ಕೂಡ ಎಲ್ಲ ವರ್ಗದ ಜನರ ಅಭಿವೃದ್ಧಿಗಾಗಿ ಸಂವಿಧಾನವನ್ನು ಬರೆದಿದ್ದಾರೆ ಎಂದರು.

ತಮ್ಮ ಜೀವನದಲ್ಲಿ ಸಾಕಷ್ಟು ಅವಮಾನ ಹಾಗೂ ಶೋಷಣೆ ಅನುಭವಿಸಿದರೂ ಕೂಡ ಎಲ್ಲ ವರ್ಗದ ಜನರ ಹಿತವನ್ನು ಕಾಪಾಡಿದ್ದಾರೆ‌. ಅಲ್ಲದೆ ದೇಶಕ್ಕೆ ಅವಿಸ್ಮರಣೀಯ ನೆನಪಿಡುವಂತ ಕೊಡುಗೆಯನ್ನು ಕೊಟ್ಟಿರುವುದು ನಿಜಕ್ಕೂ ಸ್ಮರಣೀಯವಾಗಿದೆ ಎಂದು ಅವರು ಹೇಳಿದರು.

Share News

About admin

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *