ಕುಂದಗೋಳ: ತಾಲೂಕಿನ ಅಲ್ಲಾಪೂರ ಗ್ರಾಮದ ಎರಡು ಅಂಗನವಾಡಿ ಕೇಂದ್ರದಲ್ಲಿ ಇಂದು 131 ನೇ ಅಂಬೇಡ್ಕರ್ ಜಯಂತಿ ಅಂಗವಾಗಿ ಪಂಚಾಯತಿ ಸದಸ್ಯ ಮಲ್ಲಿಕಾರ್ಜುನ ರೆಡ್ಡಿ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು .
ಈ ಸಂದರ್ಭದಲ್ಲಿ ಒಂದನೇ ಅಂಗನವಾಡಿ ಕೇಂದ್ರಕ್ಕೆ ಚೇರ್ ಟೇಬಲ್ ಇನ್ನು ಹಲವಾರು ವಸ್ತುಗಳನ್ನು ಸಹಾಯ ಹಸ್ತ ನೀಡಿದ ಗ್ರಾಮದ ದಾನಿಗಳಿಗೆ ಒಂದನೇ ಅಂಗನವಾಡಿ ಕಾರ್ಯಕರ್ತೆ ಯಿಂದ ಸಸಿ ನೀಡುವ ಮೂಲಕ ಗೌರವಿಸಿದರು ಈ ಸಂದರ್ಭದಲ್ಲಿ ಬಾಲ ವಿಕಾಸ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಆಶಾ ಅಂಗನವಾಡಿ ಕಾರ್ಯಕರ್ತೆಯರು ಮಹಿಳೆಯರು ಮಕ್ಕಳು ಉಪಸ್ಥಿತರಿದ್ದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

