ಹುಬ್ಬಳ್ಳಿ: ಮೂಲವ್ಯಾಧಿಯಿಂದ ಬೇಸತ್ತು ವೃದ್ಧನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮಾವನೂರ ಗ್ರಾಮದಲ್ಲಿ ಗುರುವಾರ ನಡೆದಿದೆ.
ಗ್ರಾಮದ ದೊಡ್ಡಫಕೀರಪ್ಪ ಚಿಂತಗಾಲ (65) ಎಂಬುವವರೇ ಆತ್ಮಹತ್ಯೆಗೆ ಶರಣಾದವನು. ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರೂ ಮೂಲವ್ಯಾಧಿಯಿಂದ ಗುಣಮುಖರಾಗಿರಲಿಲ್ಲ. ಇದರಿಂದ ಮನನೊಂದು ಗ್ರಾಮದ ಸ್ಮಶಾನದಲ್ಲಿ ಬೇವಿನಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

