ಗದಗ: ‘ತೋಂಟದಾರ್ಯ ಮಠದ ಲಿಂಗೈಕ್ಯ ಡಾ. ಸಿದ್ದಲಿಂಗ ಸ್ವಾಮೀಜಿ ಅವರ ಜನ್ಮದಿನವಾದ ಫೆ.21 ಅನ್ನು ಭಾವೈಕ್ಯ ದಿನ’ವನ್ನಾಗಿ ಆಚರಿಸಲು ಸರ್ಕಾರದಿಂದ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ತೋಂಟದಾರ್ಯ ಮಠದಲ್ಲಿ ನಿರ್ಮಾಣಗೊಂಡಿರುವ ತ್ರಿವಿಧ ದಾಸೋಹಿ ಲಿಂಗೈಕ್ಯ ಸಿದ್ಧಲಿಂಗ ಸ್ವಾಮೀಜಿ ಐಕ್ಯಮಂಟಪವನ್ನು ಶುಕ್ರವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
‘ಶ್ರೀಗಳ ಐಕ್ಯಮಂಟಪವನ್ನು ಲೋಕಾರ್ಪಣೆ ಮಾಡುವ ಅವಕಾಶ, ಹಿಂದೆ ಶ್ರೀಗಳ ಒಡನಾಟ ಸಿಕ್ಕಿದ್ದು ನನ್ನ ಪೂರ್ವಜನ್ಮದ ಪುಣ್ಯ. ತೋಂಟದಾರ್ಯ ಮಠದೊಂದಿಗೆ 35 ವರ್ಷಗಳ ಒಡನಾಟವಿದೆ. ನಾನು ಇಲ್ಲಿಗೆ ಮುಖ್ಯಮಂತ್ರಿಯಾಗಿ ಬರದೇ ಭಕ್ತನಾಗಿ ಬಂದಿದ್ದೇನೆ’ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

