Breaking News

ಹುಬ್ಬಳ್ಳಿ ಮರ್ಯಾದೆ ಹಾಳು ಮಾಡಬಾರದು: ಬಸವರಾಜ ಹೊರಟ್ಟಿ

ಹುಬ್ಬಳ್ಳಿ: ಸಮಾಜದಲ್ಲಿ ಒಡಕನ್ನು ಉಂಟು ಮಾಡಿ, ವಿನಾಕಾರಣ ಪ್ರಾಣಹಾನಿ ಮಾಡಿ, ಆಸ್ತಿ ಹಾನಿ ಆಗಬಾರದು. ಆ ದೃಷ್ಟಿಯಲ್ಲಿ ಯಾರು ತಪ್ಪು ಮಾಡಿದ್ದಾರೆ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಹುಬ್ಬಳ್ಳಿ ಗಲಭೆ ವಿಚಾರವಾಗಿ ಮಾತನಾಡಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ಇಲ್ಲಿಯವರೆಗೆ ಬಹಳ ಶಾಂತ ರೀತಿಯಲ್ಲಿದೆ. ಮತ್ತೆ ಹಿಂದಿನ ದಿನಗಳು ಮರುಕಳಿಸಬಾರದು. ರಾಜ್ಯದಲ್ಲಿ ಹುಬ್ಬಳ್ಳಿ ಬಗ್ಗೆ ಕೆಟ್ಟ ಅಭಿಪ್ರಾಯ ಮೂಢಬಾರದು. ಇದಕ್ಕೆ ಹುಬ್ಬಳ್ಳಿಯ ಎಲ್ಲ ನಾಗರಿಕರರು ಸಹಕಾರ ಮಾಡಬೇಕು‌. ಪ್ರತಿಯೊಬ್ಬರು ನಮ್ಮೂರು ಎಂಬುದನ್ನು ಮನಸ್ಸಿನಲ್ಲಿ ಇಟ್ಟುಕೊಂಡು ನಮ್ಮೂರು ಅಭಿಮಾನವನ್ನು ಕಂಡುಕೊಳ್ಳಬೇಕು‌. ‌ನಮ್ಮ ಮರ್ಯಾದೆಯನ್ನು ಕಳೆದುಕೊಳ್ಳಬಾರದು ಎಂಬುದು ಎಲ್ಲರ ಮನಸ್ಸಿನಲ್ಲಿ ಬರಲಿ ಎಂದು ಮನವಿ ಮಾಡಿದರು.

ಈಗಾಗಲೇ ಪೋಲಿಸ್ ಕಮಿಷನರ್ ಜೊತೆಗೆ ಮಾತನಾಡಿದ್ದೇನೆ‌. ಯಾರು ತಪ್ಪು ಮಾಡಿದ್ದಾರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ತಿಳಿಸಿದ್ದಾರೆ. ಯಾವುದೇ ರೀತಿಯ ಅಹಿತಕರ ಘಟನೆ ಆಗದ ಹಾಗೇ ನೋಡಿಕೊಳ್ಳಿ ಎಂದು ತಿಳಿಸಿದ್ದೇ‌ನೆ. ಅವರು ಬಂದೋಬಸ್ತ್ ಮಾಡಲಾಗಿದೆ ಎಂದು‌ ತಿಳಿಸಿದ್ದಾರೆ. ಯಾರೇ ಇರಲಿ ತಪ್ಪು ಮಾಡಿದವರ ವಿರುದ್ಧ ಕ್ರಮ ತೆಗೆದುಕೊಂಡು ಇನ್ನೊಂದು ಸಾರಿ ಇಂತಹ ಘಟನೆಗಳು ಆಗದಂತೆ ಸರ್ಕಾರ ಎಚ್ಚರ ವಹಿಸಬೇಕೆಂದು ತಿಳಿಸಿದರು.

ಪೋಲಿಸ ಇಲಾಖೆ ಪರೀಕ್ಷೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಪರೀಕ್ಷೆಗಳು ಸರಿಯಾದ ರೀತಿಯಲ್ಲಿ ನಡೆಯಬೇಕು. ಪೋಲಿಸ್ ಇಲಾಖೆಯಲ್ಲಿ ಸರಿಯಾಗಿ ನಡೆಯಬೇಕು. ಯಾಕೆಂದರೆ ನಾಡಿನ ರಕ್ಷಣೆ ಮಾಡುವವರು ಅವರೇ, ಹಾಗಾಗಿ ಸರಿಯಾದ ರೀತಿಯಲ್ಲಿ ನಡೆಸಬೇಕೆಂದರು.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *