ಧಾರವಾಡ: ನಗರದ ಪಶು ಆಸ್ಪತ್ರೆಯ ಸುಸಜ್ಜಿತ ನೂತನ ಕಟ್ಟಡವನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಲೋಕಾರ್ಪಣೆಗೊಳಿಸಿದರು.
ಧಾರವಾಡದ ಜಿಲ್ಲಾ ಆಸ್ಪತ್ರೆಗೆ ಹೋಗುವ ರಸ್ತೆಯಲ್ಲಿ ಈ ನೂತನ ಕಟ್ಟಡ ನಿರ್ಮಾಣಗೊಂಡಿದ್ದು , ಶನಿವಾರ ಅಧಿಕೃತವಾಗಿ ಉದ್ಘಾಟನೆ ಮಾಡಲಾಯಿತು.ಕಟ್ಟಡ ಉದ್ಘಾಟನೆ ಬಳಿಕ ಆಸ್ಪತ್ರೆಯಲ್ಲಿ ವಿವಿಧ ಸೌಲಭ್ಯಗಳ ಬಗ್ಗೆ ಸಚಿವರು ಮಾಹಿತಿ ಪಡೆದುಕೊಂಡರು .
ಶಾಸಕರಾದ ಅರವಿಂದ ಬೆಲ್ಲದ , ಅಮೃತ ದೇಸಾಯಿ , ಜಿಲ್ಲಾಧಿಕಾರಿ ನಿತೇಶ್ ಪಾಟೀಲ , ಜಿಲ್ಲಾ ಪಂಚಾಯ್ತಿ ಸಿಇಓ ಸುರೇಶ ಇಟ್ನಾಳ , ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಈರಣ್ಣ ಜಡಿ ಸೇರಿದಂತೆ ಅನೇಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

