Breaking News

ಸಾಲಭಾದೆ ತಾಳಲಾರದೆ ಕೆರೆಗೆ ಹಾರಿ ಆತ್ಮಹತ್ಯೆ

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಲ್ಕಟ್ಟೆ ಕೆರೆಯಲ್ಲಿ ಬೆಟ್ಟಹಳ್ಳಿ ಗ್ರಾಮದ ವಿಜಯ್ ಸಾಲಭಾಧೆ ತಾಳಲಾರದೆ ಸೋಮವಾರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದನು.

ಸೋಮವಾರದಿಂದ ಅಗ್ನಿ ಶಾಮಕದಳದವರು ಶವ ಪತ್ತೆಗಾಗಿ ಪ್ರಯತ್ನಿಸಿದ್ದರು, ಶವ ಸಿಕ್ಕಿರಲಿಲ್ಲ ಮಂಗಳವಾರ ಬೆಳಗ್ಗೆ ಕಲ್ಕಟ್ಟೆ ಕೆರೆಯಲ್ಲಿ ವಿಜಯ್ ಶವ ದೊರೆತಿದೆ. ಆತ್ಮಹತ್ಯೆ ಮಾಡಿಕೊಂಡಿರುವ ವಿಜಯ್ ಗೆ 25 ಲಕ್ಷ ರೂಪಾಯಿಗಳ ಸಾಲ ಇತ್ತೆಂದು ಹೇಳಲಾಗಿದ್ದು, ಈ ಬಗ್ಗೆ ಸಾಲಗಾರರು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇದರಿಂದ ಮಾನಸಿಕವಾಗಿ ಬಳಲಿಹೋಗಿದ್ದ ವಿಜಯ್ ಸಾಲ ತೀರಿಸಲಾಗದೆ ಸಾವಿನ ಹಾದಿ ಹಿಡಿದರು ಎನ್ನಲಾಗುತ್ತಿದೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *