Breaking News

ದಿಂಗಾಲೇಶ್ವರ ಶ್ರೀ ತಡೆಯಲು ನಾಕಾಬಂದಿ ಸಜ್ಜು

ಗದಗ: ಹಲವು ದಿನಗಳಿಂದ ಪರಿಷಂಟೇಜ್ ವಿಚಾರಕ್ಕೆ ಸಂಬಂಧಿಸಿದಂತೆ ದಿಂಗಾಲೇಶ್ವರ ಶ್ರೀ ಹಾಗೂ ಸರ್ಕಾರದ ಮದ್ಯೆ ಜಟಾಪಟಿ ನಡೆದೇ ಇದೆ. ಅದರಲ್ಲೂ ಸಚಿವ ಸಿ.ಸಿ. ಪಾಟೀಲ್ ಹಾಗೂ ಶ್ರೀಗಳ ವಿರುದ್ಧದ ವಾಕ್ಸಮರ್, ಶ್ರೀಗಳ ಭಕ್ತರು ಹಾಗೂ ಸಚಿವರ ಅಭಿಮಾನಿಗಳ ಮದ್ಯದಲ್ಲೂ ಬಂದು ನಿಂತಿದೆ. ಶ್ರೀಗಳ ಪೂರ್ವಾಶ್ರಮದ ಬಗೆಗಿನ ಹೇಳಿಕೆಯನ್ನು ಹಿಂಪಡೆದು ಕ್ಷಮಾಪಣೆ ಕೇಳಬೇಕು. ಇಲ್ಲದಿದ್ರೆ ಸಚಿವರ ಮನೆಯೆದುರು ಏ.27ರಂದು ಧರಣಿ ಹಮ್ಮಿಕೊಳ್ಳುವ ಬಗ್ಗೆ ಶ್ರೀಗಳು ಹೇಳಿಕೆ ನೀಡಿದ್ರು. ಈ ಹಿನ್ನೆಲೆಯಲ್ಲಿ ಇಂದು ಫಕೀರ ದಿಂಗಾಲೇಶ್ವರ ಶ್ರೀಗಳು ಸಚಿವ ಸಿ.ಸಿ. ಪಾಟೀಲ್ ಮನೆ ಎದುರು ಧರಣಿಗೆ ಆಗಮಿಸಬಹುದೆಂಬ ಮುನ್ನೆಚ್ಚರಿಕೆ ಕ್ರಮವಾಗಿ
ಶ್ರೀಗಳನ್ನು ತೆಡೆಯಲು ಪೊಲೀಸ್ ನಾಕಾಬಂದಿ ನಿರ್ಮಿಸಿದೆ. ನರಗುಂದ ಹೊರವಲಯದ ಕಲಕೇರಿ ಸೇರಿದಂತೆ ಪಟ್ಟಣದ ಮೂರು ಭಾಗದಲ್ಲಿ ನಾಕಾಬಂದಿ ನಿರ್ಮಿಸಿದ್ದು, ಕುರ್ಲಗೆರಿ, ಅಳಗವಾಡಿ ರಸ್ತೆಯಲ್ಲೂ ಪೊಲೀಸ್ ನಿಯೋಜನೆ ಮಾಡಲಾಗಿದೆ. ದಿಂಗಾಲೇಶ್ವರ ಶ್ರೀಗಳ ನರಗುಂದ ಎಂಟ್ರಿಗೆ ಬ್ರೇಕ್ ಹಾಕಲು ಪೊಲೀಸರು ಮುಂದಾಗಿದ್ದಾರೆ.

ಶ್ರೀಗಳನ್ನ ತಡೆಯಲು ಡಿವೈಎಸ್ ಪಿ ವೈ.ಎಸ್. ಎಗನಗೌಡರ್, ಸಿಪಿಐ ಎಮ್.ಜಿ. ಮಠಪತಿ ನೇತೃತ್ವದಲ್ಲಿ ನಾಕಾಬಂದಿ ನಿರ್ಮಿಸಿದ್ದು, ಕೆಎಸ್ ಆರ್ ಪಿ ತುಕಡಿ ಜೊತೆ ಮೂವತ್ತಕ್ಕೂ ಹೆಚ್ಚು ಪೊಲೀಸರ ನಿಯೋಜನೆ‌ ಮಾಡಲಾಗಿದೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *