ನರಗುಂದ: ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸರು ಸ್ವತಂತ್ರರಾಗಿದ್ದಾರೆ. ಆದ್ದರಿಂದ ದಿಂಗಾಲೇಶ್ವರ ಶ್ರೀಗಳನ್ನು ನರಗುಂದ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ತಡೆದಿರಬಹುದು. ಆದರೆ ನಾನು ಯಾವುದೇ ರೀತಿಯ ಪ್ರಭಾವ ಬಳಸಿ ಪೊಲೀಸರಿಂದ ದಿಂಗಾಲೇಶ್ವರ ಶ್ರೀ ಹೋರಾಟವನ್ನು ತಡೆದಿಲ್ಲ’ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಹೇಳಿದರು.
ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈಚೆಗೆ ಗದಗ ತೋಂಟದಾರ್ಯ ಮಠಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲಿಂ.ಸಿದ್ಧಲಿಂಗ ಶ್ರೀಗಳ ಸ್ಮರಣಾರ್ಥವಾಗಿ ಪ್ರತಿವರ್ಷ ಭಾವೈಕ್ಯ ದಿನಾಚರಣೆ ಆಚರಿಸುವುದಾಗಿ ಹೇಳಿದ್ದಾರೆ. ಇದನ್ನು ಸಹಿಸಿಕೊಳ್ಳಲಾಗದ ದಿಂಗಾಲೇಶ್ವರ ಶ್ರೀ ಪರ್ಸೆಂಟೆಜ್ ಸರ್ಕಾರ ಎಂದು ಆರೋಪ ಮಾಡಿರುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

