ಹುಬ್ಬಳ್ಳಿ: ರಾಜ್ಯದಲ್ಲಿ ಸರ್ಕಾರಿ ನೌಕರಿ ಪಡೆಯಲು ಅವ್ಯವಾಹರ ನಡೆಯುತ್ತಿರುವ ಬಗ್ಗೆ ತನಿಖೆ ಮಾಡಿ ಸೂಕ್ತ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಹಾಕುತ್ತ ನಗರದ ತಹಶಿಲ್ದಾರರ ಕಚೇರಿ ಎದುರಿಗೆ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ
ಪ್ರತಿಭಟನೆ ಮಾಡಿ, ತಹಶೀಲ್ದಾರರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈಗಾಗಲೇ ರಾಜ್ಯದಲ್ಲಿ ಪಿಎಸ್ಐ ಹಗರಣ ಹೊರ ಬಂದಿದೆ. ಅದೇ ರೀತಿ ಹಲವಾರು ಸರ್ಕಾರಿ ನೌಕರಿಗಳಲ್ಲಿ ಪರ್ಸಂಟೇಜ್ ಆಧಾರದಲ್ಲಿ ನಿಂತಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಭ್ರಷ್ಟಾಚಾರ ತಾಂಡವಾಡುತ್ತಿದೆ. ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ವಿದೆ. ಯಾವ ಒಬ್ಬ ವಿದ್ಯಾರ್ಥಿಗೆ ಸರ್ಕಾರಿ ನೌಕರಿ ಸಿಕ್ಕಿಲ್ಲಾ ಎಂದು ರಾಜ್ಯ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು ಗರಂ ಆಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

