ಧಾರವಾಡ : ವಿಆರ್ , ಎಲ್ ಲಾರಿ ಹಾಗೂ ಅಶೋಕ ಲೈಲ್ಯಾಂಡ್ ಲಾರಿಯ ನಡುವೆ ಇಂದು ಬೆಳಗಿನ ಜಾವ ನಡೆದಿರುವ ಭೀಕರ ಅಪಘಾತದಲ್ಲಿ ಇಬ್ಬರು ಸಾವಿಗೀಡಾಗಿದ್ದು , ಮತ್ತೋರ್ವನ ಸ್ಥಿತಿ ಚಿಂತಾಜನಕವಾದ ಘಟನೆ ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮದ ಬಳಿ ಸಂಭವಿಸಿದೆ .
ಧಾರವಾಡದಿಂದ ಸವದತ್ತಿಗೆ ಹೋಗುತ್ತಿದ್ದಲಾರಿಗೆ ಎದುರಿಗೆ ಬಂದ ಲಾರಿಯು ಡಿಕ್ಕಿ ಹೊಡೆದ ಪರಿಣಾಮ , ಇಬ್ಬರು ಚಾಲಕರು ಸ್ಥಳದಲ್ಲಿ ಸಾವಿಗೀಡಾಗಿದ್ದಾರೆ ಎರಡು ಲಾರಿಗಳ ಮುಂದಿನ ಭಾಗ ಸಂಪೂರ್ಣ ಜಖಂಗೊಂಡಿದ್ದು , ಚಾಲಕರ ಶವಗಳು ಲಾರಿಯಲ್ಲಿ ಸಿಲುಕಿವೆ.ಮೃತಪಟ್ಟವರ ಮಾಹಿತಿ ಇನ್ನೂ ಲಭ್ಯವಾಗಿಲ್ಲ.ಘಟನೆಯಿಂದ ಧಾರವಾಡ ಸವದತ್ತಿ ರಸ್ತೆ ಸಂಪೂರ್ಣವಾಗಿ ಬಂದ್ ಆಗಿದೆ . ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ .
bigtvnews | Hubli Dharwad News | Kannada News | Karnataka News Hubli News | News In Hubli | Local news

