ಚಿತ್ರದುರ್ಗದ ಮುರುಘಾ ಮಠದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಬಸವಶ್ರೀ’ ಪ್ರಶಸ್ತಿ ಈ ಬಾರಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಸಂದಿದ್ದು, ನಾಳೆ ಶ್ರೀಮಠದ ಅನುಭವ ಮಂಟಪದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಇದನ್ನು ಪ್ರದಾನ ಮಾಡಲಾಗುವುದು.
ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಅವರಿಗೆ ‘ಬಸವಶ್ರೀ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಡಾಕ್ಟರ್ ಶ್ರೀ ಶಿವಮೂರ್ತಿ ಮುರುಘಾ ಶರಣರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಚಿವ ಬಿ.ಸಿ. ಪಾಟೀಲ್, ಶಾಸಕ ತಿಪ್ಪಾರೆಡ್ಡಿ, ನಟರಾದ ಡಾ. ಶಿವರಾಜ್ ಕುಮಾರ್, ರಾಘವೇಂದ್ರ ರಾಜಕುಮಾರ್ ಉಪಸ್ಥಿತರಿರಲಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

