ಹುಬ್ಬಳ್ಳಿ : ನಗರದಯಲ್ಲಿ ಮುಸ್ಲಿಂ ಬಾಂಧವರು ಶ್ರದ್ಧಾಭಕ್ತಿಗಳಿಂದ ರಂಜಾನ್ ಆಚರಿಸಲಾಯಿತು. ಹುಬ್ಬಳ್ಳಿಯ ಐತಿಹಾಸಿಕ ಈದ್ಗಾ ಮೈದಾನದಲ್ಲಿ ಸಾಮೂಹಿಕ ಮುಸ್ಲಿಂ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ ನಡೆಯಿತು.
ಕಳೆದ ಎರಡು ವರ್ಷಗಳಿಂದ ಕೋವಿಡ್ ಹಿನ್ನೆಲೆ ಸಾಮೂಹಿಕ ಪ್ರಾರ್ಥನೆ ಸ್ಥಗಿತಗೊಂಡಿತ್ತು. ಈ ಬಾರಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಹಿನ್ನೆಲೆಯಲ್ಲಿ, ಮುಸ್ಲಿಂ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ವಿವಾದದ ಕೇಂದ್ರ ಬಿಂದುವಾಗಿದ್ದ ಚೆನ್ನಮ್ಮ ವೃತ್ತದಲ್ಲಿನ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.
ಮಾಜಿ ಸಚಿವ ಎ ಎಂ ಹಿಡಸಗೇರಿ, ಹೊಸಮಠದ ಚಂದ್ರಶೇಖರ ಶಿವಯೋಗಿ ಸ್ವಾಮೀಜಿ ಸೇರಿದಂತೆ ಹಲವು ಗಣ್ಯರಿಂದ ಮುಸ್ಲಿಂ ಬಾಂಧವರಿಗೆ ಶುಭಾಶಯ ವಿನಿಮಯ ಮಾಡಿದರು.
ಶಾಸಕ ಪ್ರಸಾದ್ ಅಬ್ಬಯ್ಯ,ಪ್ರಾರ್ಥನೆ ಸಲ್ಲಿಸಿ ನಂತರ ಹಬ್ಬದ ಶುಭಾಷಯ ವಿನಿಮಯ ಮಾಡಿಕೊಂಡಿದ್ದರು. ರಂಜಾನ್ ಹಾಗೂ ಬಸವ ಜಯಂತಿ ಹಿನ್ನೆಲೆ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.
bigtvnews | Hubli Dharwad News | Kannada News | Karnataka News Hubli News | News In Hubli | Local news

